ಟೈಂ ಪಾಸ್ ಬರಹಗಳು

July 13, 2009

Filed under: Uncategorized — saagari @ 4:53 pm

ಕರ್ನಾಟಕದಲ್ಲಿ ಜನಪದ ಸಂಗೀತದಷ್ಟೇ ಪ್ರಸಿದ್ಧವಾಗಿರುವುದು ಗಮಕ ಕಲೆ ಮತ್ತು ಗಮಕ ಶೈಲಿಯ ಗಾಯನ. ಗಮಕ ಎಂದ ತಕ್ಷಣ ಎಲ್ಲರಿಗು ನೆನಪಾಗುವುದು ಕುಮಾರವ್ಯಾಸನ “ಕರ್ನಾಟ ಭಾರತ ಕಥಾ ಮಂಜರಿ “ಯ ವಾಚನ ಮತ್ತು ವ್ಯಾಖ್ಯಾನ. ಕುಮಾರವ್ಯಾಸನ ಕಾವ್ಯ ಮಾತ್ರವಲ್ಲದೆ, ಲಕ್ಷ್ಮೀಶನ ಜೈಮಿನಿ ಭಾರತ, ತೊರವೆ ರಾಮಾಯಣ ಮುಂತಾದ ಕಾವ್ಯಗಳು ಕೂಡ ಪ್ರಚಲಿತವಾಗಿವೆ. ನನ್ನ ಸ್ನೇಹಿತರು ಸ್ಥಾಪಿಸಿರುವ ಪ್ರಣತಿ ಸಂಸ್ಥೆಯು [www.pranati.in]ಹೊಸ ಪ್ರಯೋಗಗಳಿಗೆ ಹೆಸರಾಗಿದೆ ಬಾರಿ ಪ್ರಣತಿಯು ಗಮಕ ವಾಚನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ವಾಚನದ ಭಾಗ ರಾಷ್ಟ್ರಕವಿ ಕುವೆಂಪುರವರ ಶ್ರೀ ರಾಮಾಯಣ ದರ್ಶನಂ ಕಾವ್ಯದ “ಶಬರಿಗಾದನು ಅತಿಥಿ ದಾಶರಥಿ”. ಜುಲೈ ಹದಿನೆಂಟು ಸಾಯಂಕಾಲ ಐದು ಘಂಟೆಗೆ ನಡೆಯುವ ಕಾರ್ಯಕ್ರಮಕ್ಕೆ ನೀವೆಲ್ಲರೂ ಅತಿಥಿಗಳಾಗಿ ಆಗಮಿಸಿ ಗಮಕ ವಾಚನದ ಆತಿಥ್ಯವನ್ನು ಸ್ವೀಕರಿಸಬೇಕೆಂದು ಕೇಳಿಕೊಳ್ಳುತ್ತೇನೆ.

gamaka_sudhaa_dhaare

Theme: Rubric. Blog at WordPress.com.

Follow

Get every new post delivered to your Inbox.